ದೇಶಾದ್ಯಂತ ಮಾಂಸಾಹಾರ ಬ್ಯಾನ್ ಮಾಡಬೇಕು: ಶತ್ರುಘ್ನ ಸಿನ್ಹಾ ಆಗ್ರಹ

Ravi Talawar
ದೇಶಾದ್ಯಂತ ಮಾಂಸಾಹಾರ ಬ್ಯಾನ್ ಮಾಡಬೇಕು: ಶತ್ರುಘ್ನ ಸಿನ್ಹಾ ಆಗ್ರಹ
WhatsApp Group Join Now
Telegram Group Join Now

ನಟ ಹಾಗೂ ರಾಜಕಾರಣಿ ಶತ್ರುಘ್ನ ಸಿನ್ಹಾಗೂ ವಿವಾದಕ್ಕೂ ಎಲ್ಲಿಲ್ಲದ ನಂಟು. ಅವರು ಮಾತನಾಡುವಾಗ ಎಡವಿ ಸಾಕಷ್ಟು ವಿವಾದ ಮಾಡಿಕೊಂಡಿದ್ದು ಇದೆ. ಈಗ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುನಿಫಾರ್ಮ್​ ಸಿವಿಲ್ ಕೋಡ್) ಜಾರಿಗೆ ಬಂದ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ದೇಶಾದ್ಯಂತ ಮಾಂಸಾಹಾರವನ್ನು ಬ್ಯಾನ್ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಅವರ ಹೇಳಿಕೆ ಈಗ ಸಾಕಷ್ಟು ಟೀಕೆಗಳನ್ನು ಎದುರಿಸಿದೆ.

ಉತ್ತರಾಖಂಡ ಸರ್ಕಾರ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತಂದ ಬಗ್ಗೆ ಶತ್ರುಘ್ನ ಸಿನ್ಹಾಗೆ ಪ್ರಶ್ನೆ ಮಾಡಲಾಯಿತು. ಈ ವೇಳೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘UCCನ ಉತ್ತರಾಖಂಡದಲ್ಲಿ ಪ್ರಾಥಮಿಕ ಹಂತದಲ್ಲಿ ಜಾರಿಗೆ ತಂದಿದ್ದು ಖುಷಿ ಇದೆ. ಇದು ದೇಶದಾದ್ಯಂತ ಬರಬೇಕು ಎಂಬುದು ನನ್ನ ಆಗ್ರಹ’ ಎಂದು ಅವರು ಹೇಳಿದ್ದಾರೆ.

ಶತ್ರುಘ್ನ ಅವರ ಹೇಳಿಕೆ ಚರ್ಚೆಗೆ ಕಾರಣ ಆಗಿದೆ. ‘ಯುಸಿಸಿಯಲ್ಲಿ ಯಾವ ಆಹರ ತಿನ್ನಬೇಕು, ಯಾವುದನ್ನು ತಿನ್ನಬಾರದು ಎಂಬುದನ್ನು ಹೇಳುತ್ತಾರಾ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ‘ಯುಸಿಸಿ ಆಹಾರ ಮತ್ತು ಅಭ್ಯಾಸಗಳ ಬಗ್ಗೆ ಇಲ್ಲ. ಇದು ಮದುವೆ ಮತ್ತು ಆಸ್ತಿಗಳ ಹಕ್ಕಿನ ಬಗ್ಗೆ ಇರುವ ಕಾಯ್ದೆ’ ಎಂದು ಕೆಲವರು ಹೇಳಿದ್ದಾರೆ.
WhatsApp Group Join Now
Telegram Group Join Now
Share This Article