ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ರಹಸ್ಯವಾಗಿ ಹೂತುಹಾಕಲಾದ ಪ್ರಕರಣದಲ್ಲಿ ಎಸ್ಐಟಿ ತನಿಖೆ ನಡೆಸುತ್ತಿದೆ. ಆದರೆ, ಹೂತುಹಾಕಲಾಗಿರುವ ಶವಗಳ ಅವಶೇಷಗಳನ್ನು ಹೊರತೆಗೆಯುವ ಪ್ರಕ್ರಿಯೆಯಲ್ಲಿ ಭೂಮಿಯ ಒಳಭಾಗವನ್ನು ಸಮೀಕ್ಷೆ ಮಾಡುವ ‘ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್’ಗಳ (ಜಿಪಿಆರ್) ಬಳಸುವ ಕುರಿತು SIT ತಜ್ಞರ ಅಭಿಪ್ರಾಯ ಪಡೆಯಲಿದೆ.
ವಿದ್ಯುತ್ ತಂತಿಗಳ ಉಪಸ್ಥಿತಿ ಮತ್ತು ಸ್ಥಳವು ಮುಖ್ಯ ರಸ್ತೆಗೆ ಹತ್ತಿರದಲ್ಲಿರುವುದರಿಂದ ಅಗೆಯುವ ಪ್ರಕ್ರಿಯೆ ಮುಂದುವರಿಸುವ ಮೊದಲು ತಜ್ಞರ ಅಭಿಪ್ರಾಯವನ್ನು ಪಡೆಯಲಾಗುತ್ತದೆ ಎಂದು SIT ಮೂಲಗಳು ತಿಳಿಸಿವೆ.
ಬೆಂಗಳೂರಿನಿಂದ GPR ಇಂದು ಅಥವಾ ನಾಳೆ ಬರುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಆರೆಂಜ್ ಅಲರ್ಟ್ ನೀಡಿದೆ ಹೀಗಾಗಿ ಮಳೆಯಾಗುವ ನಿರೀಕ್ಷೆಯಿದೆ. GPR ಬಳಸಿ ನಾವು ಈಗ ಸ್ಥಳ 13 ರ ಮೇಲೆ ಮಾತ್ರ ಗಮನಹರಿಸುತ್ತಿದ್ದೇವೆ ಎಂದು SIT ಯೊಂದಿಗೆ ಸಂಬಂಧ ಹೊಂದಿರುವ ಅಧಿಕಾರಿಯೊಬ್ಬರು TNIE ಗೆ ತಿಳಿಸಿದ್ದಾರೆ.
ಡಿಜಿಪಿ ಪ್ರಣಬ್ ಮೊಹಂತಿ, ಡಿಐಜಿ ಎಂ ಎನ್ ಅನುಚೇತ್ ಮತ್ತು ಪ್ರಕರಣದ ತನಿಖಾ ಅಧಿಕಾರಿ (IO) ಆಗಿರುವ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ನೇತೃತ್ವದ SIT ತಂಡ ಇಂದು ಸ್ಥಳಕ್ಕೆ ಭೇಟಿ ನೀಡಿ ತಜ್ಞರ ಸಮೀಕ್ಷೆ ನಡೆಸುವ ನಿರೀಕ್ಷೆಯಿದೆ.