ಸನ್ನಿವೇಶ ಬಂದ್ರೆ ಸಚಿವ ಹೆಚ್​ಡಿ ಕುಮಾರಸ್ವಾಮಿ ಮುಲಾಜಿಲ್ಲದೆ ಅರೆಸ್ಟ್: ಸಿಎಂ ಸಿದ್ದರಾಮಯ್ಯ ಟಾಂಗ್

Ravi Talawar
ಸನ್ನಿವೇಶ ಬಂದ್ರೆ ಸಚಿವ ಹೆಚ್​ಡಿ ಕುಮಾರಸ್ವಾಮಿ ಮುಲಾಜಿಲ್ಲದೆ ಅರೆಸ್ಟ್: ಸಿಎಂ ಸಿದ್ದರಾಮಯ್ಯ ಟಾಂಗ್
WhatsApp Group Join Now
Telegram Group Join Now

ಕೊಪ್ಪಳ, ಆಗಸ್ಟ್​.21: ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರನ್ನು ಅರೆಸ್ಟ್​ ಮಾಡಿ ಎಂದು ನಾನು ಎಲ್ಲೂ ಹೇಳಿಲ್ಲ. ಆದರೆ ಅಂತಹ ಸನ್ನಿವೇಶ ಬಂದ್ರೆ ಮುಲಾಜಿಲ್ಲದೆ ಅರೆಸ್ಟ್ ಮಾಡುತ್ತೇವೆ. ಕುಮಾರಸ್ವಾಮಿ ಭಯ ಪಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. SSVM ಕಂಪನಿಗೆ ನಿಯಮ ಉಲ್ಲಂಘಿಸಿ ಭೂಮಿ ಮಂಜೂರು ಆರೋಪಕ್ಕೆ ಸಂಬಂಧಿಸಿ ಕೊಪ್ಪಳ ತಾಲೂಕಿನ ಗಿಣಗೇರಾ ಏರ್​ಸ್ಟ್ರಿಪ್​​ನಲ್ಲಿ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿ ಸುಳ್ಳು ಹೇಳಿ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಅರೆಸ್ಟ್ ಮಾಡಿ ಅಂತ ನಾನು ಎಲ್ಲೂ ಹೇಳಿಲ್ಲ, ಅಂತಹ ಸನ್ನಿವೇಶ ಬಂದ್ರೆ ಯಾವುದೇ ಮುಲಾಜಿಲ್ಲದೇ ಅರೆಸ್ಟ್ ಮಾಡ್ತೇವೆ. ಕುಮಾರಸ್ವಾಮಿ ಭಯ ಪಟ್ಟಿದ್ದಾರೆ. ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಡ್ತಾರೆಂದು ಭಯ ಪಟ್ಟಿದ್ದಾರೆ.

WhatsApp Group Join Now
Telegram Group Join Now
Share This Article