ಬಡವರ ಮನೆ ನೀಡಲು ಹಣ ಪಡೆಯುತ್ತಿರುವ ಸರ್ಕಾರ ತೊಲಗಬೇಕು: ಸುಭಾಷ್ ಪಾಟೀಲ

Ravi Talawar
ಬಡವರ ಮನೆ ನೀಡಲು ಹಣ ಪಡೆಯುತ್ತಿರುವ ಸರ್ಕಾರ ತೊಲಗಬೇಕು: ಸುಭಾಷ್ ಪಾಟೀಲ
WhatsApp Group Join Now
Telegram Group Join Now
ಬೆಳಗಾವಿ.ಬಡವರ ಮನೆ ಹಂಚಿಕೆಗೆ ಹಣ ಪಡೆಯುತ್ತಿರುವ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ವಸತಿ ಸಚಿವ ಜಮೀರ್ ಅಹಮ್ಮದ್ ಅವರ ರಾಜೀನಾಮೆಗೆ ನೀಡಿ ಮನೆಗೆ ಹೋಗಬೇಕು. ಪ್ರಸಕ್ತ ಕಾಂಗ್ರೆಸ್ ಸರ್ಕಾರ ಅತೀ ಭ್ರಷ್ಟ ಸರ್ಕಾರ ಅಗಿದ್ದು, ಕಾಂಗ್ರೆಸ್ ಶಾಸಕರೇ ನೇರವಾಗಿ ಆರೋಪ ಮಾಡಿದ್ದು ಅದಕ್ಕಾಗಿ ಬಡವರ ರಕ್ತ ಹಿರುತ್ತಿರುವ  ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರೆಯುವ ಯಾವುದೇ ನೈತಿಕ ಹಕ್ಕು ಇಲ್ಲಾ ಎಂದು   ಬಿಜೆಪಿ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ ಹೇಳಿದರು.
    ಅವರು ಶುಕ್ರವಾರದಂದು ರಾಣಿ ಚೆನ್ನಮ್ಮ ವೃತ್ತದಿಂದ ಪ್ರತಿಭಟನೆಯಲ್ಲಿ ಮಾತನಾಡಿದರು. ಚನ್ನಮ ಸರ್ಕಲ್ ಮೂಲಕ ಜಿಲ್ಲಾ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕುವ ಸಂದರ್ಭದಲ್ಲಿ ಕಚೇರಿ ಮುಂದೆ ಬಿಜೆಪಿ ಕಾರ್ಯಕರ್ತರನ್ನು ಪೋಲಿಸರು ಬಂಧಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಜಿಲ್ಲಾಧ್ಯಕ್ಷರಾದ ಗೀತಾ ಸುತಾರ,ಮುಖಂಡ ಸಂಕಲ್ಪ ಶೆಟ್ಟರ , ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ ದೇಶಪಾಂಡೆ, ಮಲ್ಲಿಕಾರ್ಜುನ ಮಾದಮ್ಮನವರ, ಧನಶ್ರೀ ದೇಸಾಯಿ, ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಸೋನಾಲಿ ಸರ್ನೋಬತ್, ಜಿಲ್ಲಾ ಉಪಾಧ್ಯಕ್ಷ ಪ್ರಮೋದ್ ಕೋಚೇರಿ, ವಿನಯ ಕದಂ,ಮಾಧ್ಯಮ ಪ್ರಮುಖರಾದ ಸಚಿನ್ ಕಡಿ, ಹನುಮಂತ ಕೊಂಗಾಲಿ, ಎಸ್ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಯಲ್ಲೇಶ ಕೊಲಕಾರ,ಜಿಲ್ಲಾ ಕೋಶಾಧ್ಯಕ್ಷ ಸಂತೋಷ ದೇಶನೂರ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹಾಂತೇಶ ಚಿನ್ನಪ್ಪಗೌಡ್ರ, ಸಾಮಾಜಿಕ ಜಾಲತಾಣ ಸಹ ಸಂಚಾಲಕ ಮನೋಜ ಪಾಟೀಲ, ಧನಂಜಯ ಜಾಧವ, ಪ್ರಶಾಂತ ಅಮ್ಮಿನಭಾವಿ, ಶ್ರೀಕರ ಕುಲಕರ್ಣಿ,ಬಸವರಾಜ ಸಾಣಿಕೋಪ್ಪ,ಜ್ಯೋತಿ ಶೆಟ್ಟಿ, ಶ್ವೇತಾ ಜಗದಾಳೆ ಹಾಗೂ ಪ್ರಮುಖ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article