ಹಿಂದೂ ಪರ ಯುವಕರ ಮೇಲೆ ಹಲ್ಲೆ ಮಾಡಿದವರ ಬಂಧಿಸಿ ಎಫ್ ಐ ಆರ್  ದಾಖಲಿಸದಿದ್ದರೇ ಜಿಲ್ಲಾದ್ಯಾಂತ ಪ್ರತಿಭಟನೆ: ಸುಭಾಷ್ ಪಾಟೀಲ 

Ravi Talawar
ಹಿಂದೂ ಪರ ಯುವಕರ ಮೇಲೆ ಹಲ್ಲೆ ಮಾಡಿದವರ ಬಂಧಿಸಿ ಎಫ್ ಐ ಆರ್  ದಾಖಲಿಸದಿದ್ದರೇ ಜಿಲ್ಲಾದ್ಯಾಂತ ಪ್ರತಿಭಟನೆ: ಸುಭಾಷ್ ಪಾಟೀಲ 
WhatsApp Group Join Now
Telegram Group Join Now
ಬೆಳಗಾವಿ.ಗೋ ರಕ್ಷಣೆ ಮಾಡಲು ಮುಂದಾದ ಹಿಂದೂ ಕಾರ್ಯಕರ್ತರ ಮೇಲೆ ಅಮಾನವೀಯ ರೀತಿಯಲ್ಲಿ ಹಲ್ಲೆ ನಡೆಸಿದ ಘಟನೆ ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದ್ದು
ಗೋ ಶಾಲೆಯಿಂದ ಗೋವುಗಳನ್ನು ತೆಗೆದುಕೊಂಡು ಹೋಗಿದ್ದನ್ನು ನೋಡಿ 5 ಜನ ಹಿಂದೂಪರ ಸಂಘಟನೆಯ  ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ. ಪ್ರಶ್ನೆ ಮಾಡಿದ್ದಕ್ಕೆ ದಲ್ಲಾಳಿಗಳು ಮರಕ್ಕೆ ಕಟ್ಟಿ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಈ ಘಟನೆಯು ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಹಿಂದೂ ಕಾರ್ಯಕರ್ತರು ನಂತರ ಪೋಲಿಸ್ ಠಾಣೆಗೆ ಹೋಗಿ ದೂರು ದಾಖಲು ಮಾಡುವಂತೆ ಹೇಳಿದರೆ  ಹಿಂದೂ ಕಾರ್ಯಕರ್ತರನ್ನು  ಅವಾಚ್ಯ ಶಬ್ದಗಳಿಂದ ನಿಂದಿಸಿ ದೂರು ದಾಖಲಿಸಿಕೊಳ್ಳದೇ ಉದ್ಧಟತನ ಪ್ರದರ್ಶಿಸಿಸಿದ್ದಾರೆ ಪೋಲಿಸರು ಯಾರ ಕುಮ್ಮಕ್ಕಿನಿಂದ ಈ ರೀತಿ ಮಾಡಿದ್ದಾರೆ ಎಂದು  ಗೊತ್ತಾಗಬೇಕು ಕೂಡಲೇ ಸರ್ಕಾರ ಹಾಗೂ ಪೋಲಿಸ್ ವರಿಷ್ಠಾಧಿಕಾರಿಗಳು ಹಿಂದೂ ಪರ ಸಂಘಟನೆಯ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಎಫ್ ಐ ಆರ್  ದಾಖಲಿಸಿ ಕಠಿಣ ಕ್ರಮ ಜರುಗಿಸಬೇಕು ಹಾಗೂ ಉದ್ಧಟತನ ಮೆರೆದ ಪೋಲಿಸ್ ಅಧಿಕಾರಿಗಳ ವಿರುದ್ಧ  ಕ್ರಮ ಜರುಗಿಸಬೇಕು  ಇಲ್ಲದಿದ್ದರೇ ಬಿಜೆಪಿ ವತಿಯಿಂದ ಜಿಲ್ಲೆಯಾದ್ಯಂತ ಹೋರಾಟ ನಿಶ್ಚಿತ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article