ಮಾನವೀಯತೆಯ ಯಶಸ್ಸು ಸಾಮೂಹಿಕ ಶಕ್ತಿಯಲ್ಲಿದೆ: ನರೇಂದ್ರ ಮೋದಿ

Ravi Talawar
ಮಾನವೀಯತೆಯ ಯಶಸ್ಸು ಸಾಮೂಹಿಕ ಶಕ್ತಿಯಲ್ಲಿದೆ: ನರೇಂದ್ರ ಮೋದಿ
WhatsApp Group Join Now
Telegram Group Join Now

ನವದೆಹಲಿ: ಮಾನವೀಯತೆಯ ಯಶಸ್ಸು ಸಾಮೂಹಿಕ ಶಕ್ತಿಯಲ್ಲಿದೆ. ಯುದ್ಧಭೂಮಿಯಲ್ಲಿ ಅಲ್ಲ. ವಿಶ್ವ ಶಾಂತಿ ಮತ್ತು ಅಭಿವೃದ್ಧಿಗಾಗಿ ಜಾಗತಿಕ ಶಕ್ತಿಗಳು ಸುಧಾರಣೆಯತ್ತ ಹೊರಳುವುದು ಅತ್ಯಗತ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದರು.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ವಿಶ್ವದ ಜನಸಂಖ್ಯೆಯ ಆರನೇ ಒಂದು ಭಾಗದಷ್ಟು ಇರುವ 1.4 ಬಿಲಿಯನ್ ಭಾರತೀಯರ ಪರವಾಗಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಬಂದಿದ್ದೇನೆ ಎಂದು ಹೇಳಿದರು.

ವಿಶ್ವಶಾಂತಿ ಇಂದಿನ ಅಗತ್ಯ ಎಂಬುದನ್ನು ಪುನರುಚ್ಛರಿಸಿದ ಮೋದಿಯವರು, ಯುದ್ಧ ಮತ್ತು ಸಂಘರ್ಷಗಳು ಇಂದಿನ ಅಗತ್ಯವಲ್ಲ. ಭವಿಷ್ಯಕ್ಕಾಗಿ ನಾವು ಅಭಿವೃದ್ಧಿ ಪಥದತ್ತ ನಡೆಯಬೇಕಿದೆ. ವಿಶ್ವ ಶಾಂತಿ ಮತ್ತು ಭದ್ರತೆಗಾಗಿ ನಾವೆಲ್ಲರೂ ಒಂದಾಗಬೇಕಿದೆ. ಹೊಸ ಸವಾಲುಗಳನ್ನು ಮೆಟ್ಟಿ ನಿಲ್ಲಬೇಕಿದೆ ಎಂದು ಹೇಳಿದರು.

ವಿಶ್ವದ ಭವಿಷ್ಯದ ಕುರಿತು ಯಾವುದೇ ಚರ್ಚೆಯಲ್ಲಿ ಮಾನವ ಕೇಂದ್ರಿತ ವಿಧಾನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಸುಸ್ಥಿರ ಅಭಿವೃದ್ಧಿಗೆ ಆದ್ಯತೆ ನೀಡುವಾಗ ಮಾನವ ಕಲ್ಯಾಣ, ಆಹಾರ ಮತ್ತು ಆರೋಗ್ಯ ಭದ್ರತೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

WhatsApp Group Join Now
Telegram Group Join Now
Share This Article