ಮಂಗಳೂರು: ನಗರ ಹೊರವಲಯದ ಬಜಪೆಯ ಕಿನ್ನಿಪದವಿನಲ್ಲಿ ಗುರುವಾರ ನಡೆದ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಇಂದು (ಮೇ 2) ಬಂದ್ಗೆ ಕರೆ ನೀಡಿದೆ.
ಈ ಬಗ್ಗೆ ಈಟಿವಿ ಭಾರತ ಜೊತೆಗೆ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್, ಸುಹಾಸ್ ಶೆಟ್ಟಿ ಕೊಲೆಯ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಬಂದ್ಗೆ ವಿಹೆಚ್ಪಿ ಕರೆ ನೀಡಿದೆ ಎಂದು ತಿಳಿಸಿದ್ದಾರೆ.
ಕೊಲೆಯ ಬಳಿಕ ನಗರದಾದ್ಯಂತ ಬಿಗುವಿನ ವಾತಾವರಣ ನಿರ್ಮಾಣಗೊಂಡಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೇ 2ರ ಬೆಳಗ್ಗೆ 6 ಗಂಟೆಯಿಂದ ಮೇ 6ರ ಬೆಳಗ್ಗೆ 6 ಗಂಟೆಯ ವರೆಗೆ ನಗರ ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.