ಮನಿ ಲಾಂಡರಿಂಗ್ ಪ್ರಕರಣದಲ್ಲಿ ಮಾಜಿ ಸಿಎಂ ಸೊರೆನ್ ಗೆ ಸುಪ್ರೀಂ ಕೋರ್ಟ್ ಛೀಮಾರಿ

Ravi Talawar
ಮನಿ ಲಾಂಡರಿಂಗ್ ಪ್ರಕರಣದಲ್ಲಿ ಮಾಜಿ ಸಿಎಂ ಸೊರೆನ್ ಗೆ ಸುಪ್ರೀಂ ಕೋರ್ಟ್ ಛೀಮಾರಿ
WhatsApp Group Join Now
Telegram Group Join Now

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸಿಕ್ಕಂತೆ ತಮಗೂ ಜಾಮೀನು ಸಿಗುತ್ತದೆ ಎಂದು ಭಾವಿಸಿದ್ದ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಗೆ ಭಾರೀ ಮುಖಭಂಗವಾಗಿದ್ದು ಮನಿ ಲಾಂಡರಿಂಗ್ ಪ್ರಕರಣ ಸಂಬಂಧ ಮಾಜಿ ಸಿಎಂ ಸೊರೆನ್ ಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದಲ್ಲಿ ನಿಯಮಿತ ಜಾಮೀನು ಅರ್ಜಿ ಸಲ್ಲಿಸುವ ಕುರಿತು ಸತ್ಯವನ್ನು ಮುಚ್ಚಿಟ್ಟಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಸುಪ್ರೀಂ ಕೋರ್ಟ್ ಇಂದು ತರಾಟೆಗೆ ತೆಗೆದುಕೊಂಡಿದ್ದು, ಜಾರಿ ನಿರ್ದೇಶನಾಲಯದ ಬಂಧನವನ್ನು ಪ್ರಶ್ನಿಸಿ ಜೆಎಂಎಂ ನಾಯಕ ತನ್ನ ಸಲ್ಲಿಸಿದ್ದ ಅರ್ಜಿಯನ್ನು ಹಿಂತೆಗೆದುಕೊಳ್ಳುವಂತೆ ಮಾಡಿದೆ.

WhatsApp Group Join Now
Telegram Group Join Now
Share This Article