ಬಳ್ಳಾರಿ,ಏ,08:ನಾಡಿನ ಪ್ರತಿಷ್ಠಿತ ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಸ್ಥೆ ಕೊಡಮಾಡುವ ‘ಸುವರ್ಣ ಕನ್ನಡಿಗ-2026’ರ ಪ್ರಶಸ್ತಿಗೆ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಎಂ. ಮುನಿರಾಜು ಭಾಜನರಾಗಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ಜರುಗಿದ ಅದ್ದೂರಿ ಕಾರ್ಯಕ್ರಮದಲ್ಲಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ನಾಡಿನ ವಿವಿಧ ಕ್ಷೇತ್ರಗಳಲ್ಲಿ ಅವಿರತ ಸೇವೆ ಮತ್ತು ಸಾಧನೆ ಮಾಡಿದ ಗಣ್ಯರನ್ನು ಗುರುತಿಸಿ ಸುವರ್ಣ ವಾಹಿನಿಯು ಪ್ರತಿವರ್ಷ ಈ ಪ್ರಶಸ್ತಿಯನ್ನು ನೀಡುತ್ತದೆ.
ಶಿಕ್ಷಣ ಕ್ಷೇತ್ರದಲ್ಲಿ ಅಭೂತಪೂರ್ವ 35 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ಅವರಿಗೆ ಪ್ರಶಸ್ತಿ ಲಭಿಸಿರುವುದು ಸಂತಸ ನೀಡಿದೆ ಎಂದು ಪ್ರೊ ಎಂ ಮುನಿರಾಜು ಅವರ ಕುಟುಂಬವರ್ಗ ಹರ್ಷ ವ್ಯಕ್ತಪಡಿಸಿದೆ.
ವಿವಿಯ ಅಧ್ಯಾಪಕರ ಸಂಘದಿAದ ಗೌರವ:
ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಸ್ಥೆಯ ‘ಸುವರ್ಣ ಕನ್ನಡಿಗ-2026’ರ ಪ್ರಶಸ್ತಿಗೆ ಪಾತ್ರರಾಗಿರುವ ಕುಲಪತಿಗಳಿಗೆ ವಿಶ್ವವಿದ್ಯಾಲಯದ ಅಧ್ಯಾಪಕರ ಸಂಘ (ರಿ) ದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ವಿವಿಯ ಕುಲಸಚಿವರಾದ ಪ್ರೊ ಎನ್ ಎಂ ಸಾಲಿರವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಗೌರವಾನ್ವಿತರಿಗೆ ದೊರಕಿರುವ ಪ್ರಶಸ್ತಿಯು ವಿಶ್ವವಿದ್ಯಾಲಯದ ಘನತೆಯನ್ನು ಹೆಚ್ಚಿಸಿದೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ದಣಿವರಿಯದೆ ನಿರಂತರ ಸೇವೆ ನೀಡುತ್ತಿರುವ ಕುಲಪತಿಗಳ ಕಾರ್ಯಕ್ಕೆ ಒದಗಿರುವ ಗರಿಮೆಯಾಗಿದೆ ಎಂದು ಹೇಳಿದರು.
ಅಧ್ಯಾಪಕರ ಸಂಘದ ಅಧ್ಯಕ್ಷರಾದ ಪ್ರೊ ತಿಪ್ಪೇರುದ್ರಪ್ಪ ಜೆ ಅವರು ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಕುಲಪತಿಗಳಿಗೆ ಪ್ರಶಸ್ತಿ ಬಂದಿರುವುದು ಅವರ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿಯಾಗಿದೆ. ಮುಂದೆ ಮತ್ತಷ್ಟು ಪ್ರಶಸ್ತಿಗಳು ಅವರಿಗೆ ಒಲಿದು ಬರಲಿ ಎಂದು ಸಂಘದ ಪರವಾಗಿ ಹಾರೈಸಿದರು.
ವಿವಿಯ ಸಿಂಡಿಕೇಟ್ ಸದಸ್ಯರು, ವಿತ್ತಾಧಿಕಾರಿ ಸ್ಫೂರ್ತಿ ಕೆ ಜಿ, ಅಧ್ಯಾಪಕರ ಸಂಘದ ಪದಾಧಿಕಾರಿಗಳು, ಎಲ್ಲ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿ ಇದ್ದರು.


