ಬೆಂಗಳೂರು: ಸೌರ ಕೃಷಿ ಪಂಪ್ ಸೆಟ್ ಯೋಜನೆ ಕುಸುಮ್-ಬಿ ಅಡಿ 40 ಸಾವಿರ ಪಂಪ್ ಸೆಟ್ಗಳ ಅಳವಡಿಕೆಗೆ ಅನುಮೋದನೆ ನೀಡಲಾಗಿದ್ದು, ತ್ವರಿತ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇಂದು ಕುಸುಮ್ ಬಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ, ಕುಸುಮ್-ಬಿ ಯೋಜನೆ ಅನುಷ್ಠಾನವನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಭೆಯಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್, ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕುಸುಮ್-ಬಿ ಪ್ರಧಾನ ಮಂತ್ರಿ ಕಿಸಾನ್ ಉರ್ಜಾ ಸುರಕ್ಷಾ ಏವಮ್ ಉತ್ಥಾನ ಮಹಾಭಿಯಾನ(ಪಿಎಂ ಕುಸುಮ್) ಯೋಜನೆಯ ಬಿ ಘಟಕವಾಗಿದ್ದು, ಇದು ನೀರಾವರಿಗಾಗಿ 14 ಲಕ್ಷ ಸ್ಟ್ಯಾಂಡ್-ಅಲೋನ್ ಸೌರ ಕೃಷಿ ಪಂಪ್ಸೆಟ್ಗಳ ಸ್ಥಾಪನೆಯ ಮೇಲೆ ಕೇಂದ್ರೀಕರಿಸುತ್ತದೆ.
ಈ ಯೋಜನೆಯಡಿಯಲ್ಲಿ, ಸೋಲಾರ್ ಕೃಷಿ ಪಂಪ್ಸೆಟ್ ಅಳವಡಿಸಲು ಕೇಂದ್ರ ಸರ್ಕಾರ ಶೇ.30 ರಷ್ಟು, ರಾಜ್ಯ ಸರ್ಕಾರ ಶೇ.50ರಷ್ಟು ಸಬ್ಸಿಡಿ ಒದಗಿಸುತ್ತಿದ್ದು, ಫಲಾನುಭವಿಗಳು ಶೇ. 20ರಷ್ಟು ಭರಿಸಬೇಕಿದೆ.