ಒಂದೆಡೆ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ನಡೆಯುತ್ತಿದ್ದು, ಇನ್ನೊಂದೆಡೆ ಬಿಟ್ ಕಾಯಿನ್ ಹಗರಣ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಪುಣೆಯ ಮಾಜಿ-ಐಪಿಎಸ್ ಅಧಿಕಾರಿ ರವೀಂದ್ರನಾಥ ಪಾಟೀಲ್ ಅವರು ಎನ್ಸಿಪಿ-(ಎಸ್ಪಿ) ನಾಯಕಿ ಮತ್ತು ಬಾರಾಮತಿ ಸಂಸದೆ ಸುಪ್ರಿಯಾ ಸುಳೆ ಮತ್ತು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ವಿರುದ್ಧ ಗಂಭೀರವಾದ ಆರೋಪ ಮಾಡಿ, 2018ರ ಕ್ರಿಪ್ಟೋಕರೆನ್ಸಿಗೆ ಸಂಬಂಧಿಸಿದ ವಂಚನೆ ಪ್ರಕರಣದಲ್ಲಿ ಅವರು ಭಾಗಿಯಾಗಿದ್ದು, ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಹಣ ಹೂಡಲು ಅದನ್ನೇ ಬಳಸಿಕೊಂಡಿದ್ದಾರೆ ಎಂದು ಹೇಳಿದ್ದರು.
ಲೋಕಸಭಾ ಸಂಸದೆ ಮತ್ತು ಎನ್ಸಿಪಿ (ಶರದ್ ಪವಾರ್) ನಾಯಕಿ ಸುಪ್ರಿಯಾ ಸುಳೆ ಅವರು ಪುಣೆಯ ಚುನಾವಣಾ ಆಯೋಗ ಮತ್ತು ಸೈಬರ್ ಸೆಲ್ಗೆ ಔಪಚಾರಿಕ ದೂರು ಸಲ್ಲಿಸಿದ್ದು, ತಮ್ಮ ಬಗ್ಗೆ ಸುಳ್ಳು ಮತ್ತು ಮಾನಹಾನಿಕರ ಮಾಹಿತಿಯನ್ನು ಹರಡಿದ ಆರೋಪದಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ತುರ್ತು ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ. ಚುನಾವಣಾ ನಿಧಿ ವಿತರಣೆಗಾಗಿ ಸುಪ್ರಿಯಾ ಸುಳೆ ಮತ್ತು ನಾನಾ ಪಟೋಲೆ ಅವರು ಕೆಲವು ಬಿಟ್ಕಾಯಿನ್ಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪಗಳು ಸೇರಿವೆ.