ಬೆಂಗಳೂರು, ಅಕ್ಟೋಬರ್ 04: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ 50 ಕೋಟಿ ರೂ. ಬೇಡಿಕೆ ಜೊತೆಗೆ ಜೀವಬೆದರಿಕೆ ಹಾಕಿದ್ದಾರೆಂದು ಆರೋಪಿಸಿರುವ ಉದ್ಯಮಿ ವಿಜಯ್ ಟಾಟಾ ವಿರುದ್ಧ ಇದೀಗ ವಿಧಾನಪರಿಷತ್ ಜೆಡಿಎಸ್ ಮಾಜಿ ಸದಸ್ಯ ರಮೇಶ್ಗೌಡ ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ರಮೇಶ್ ಗೌಡರ ದೂರನ್ನು ಪೊಲೀಸರು ಸ್ವೀಕರಿಸಿದ್ದಾರೆ.
ನೂರು ಕೋಟಿ ರೂ. ಹಣ ಕೇಳಿದ್ದ, ಇಲ್ಲ ಅಂದಿದ್ದಕ್ಕೆ, ಆ.24ರಂದು ಮನೆಗೆ ಊಟಕ್ಕೆ ಕರೆದಾಗ ಬೆದರಿಕೆ ಹಾಕಿದ್ದಾರೆ. ನಾನು ಈಗಾಗಲೇ ಲಾಸ್ನಲ್ಲಿದ್ದೇನೆ, ನನಗೆ ಹಣ ಬೇಕು. ನೀವು ನೂರು ಕೋಟಿ ರೂ. ಕೊಡಿ, ಇಲ್ಲವಾದರೆ ನಿಮ್ಮನ್ನ ಮತ್ತು ಹೆಚ್ಡಿ ಕುಮಾರಸ್ವಾಮಿಯನ್ನ ಬಿಡಲ್ಲ ಎಂದು ಬೆದರಿಕೆ ಹಾಕಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.