ಬೆಳಗಾವಿ. ನಗರದ ಗೋಮಟೇಶ ವಿದ್ಯಾಪೀಠದಲ್ಲಿ ನಡೆದ ವಿಕಸಿತ ಭಾರತದ ಅಮೃತಕಾಲ ಜಿಲ್ಲಾ ಮಟ್ಟದ ವೃತ್ತಿಪರರ ಸಭೆ ಮತ್ತು ಪ್ರದರ್ಶನವನ್ನು ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಜಗದೀಶ್ ಶೆಟ್ಟರ್ ಅವರು ಉದ್ಘಾಟಿಸಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಭಾರತ ಸರ್ಕಾರ ಕಳೆದ 11 ವರ್ಷಗಳಿಂದ ಜನಪರವಾದ ಉತ್ತಮ ಆಡಳಿತ ನೀಡಿದ ಪರಿಣಾಮವಾಗಿ ಆರ್ಥಿಕವಾಗಿ ಹತ್ತನೇ ಸ್ಥಾನದಲ್ಲಿದ್ದ ಭಾರತ ಜಪಾನ್ ಹಿಂದಿಕ್ಕಿ ನಾಲ್ಕನೇ ಸ್ಥಾನಕ್ಕೆ ಬಂದಿದ್ದು ಶೀಘ್ರದಲ್ಲೇ ಆರ್ಥಿಕವಾಗಿ ಮೂರನೇ ಸ್ಥಾನ ಅಲಂಕರಿಸಲಿದೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆ, ಆಯುಷ್ಮಾನ್ ಭಾರತ, ಜಲಜೀವನ ಮಿಷನ್ ಸೇರಿದಂತೆ 10 ಹಲವು ಯೋಜನೆಗಳನ್ನು ಜಾರಿಗೆ ತಂದು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರಕಾರದ ಯೋಜನೆಗಳನ್ನು ಮುಟ್ಟಿಸಿದೆ ಎಂದು ಹೇಳಿದರು.
ಮಾಜಿ ಶಾಸಕರಾದ ಸಂಜಯ್ ಪಾಟೀಲ್ ಹಾಗೂ ಬಿಜೆಪಿ ವಕ್ತಾರರಾದ ನಾಗರಾಜ್ ಕುಲಕರ್ಣಿ ಅವರು ಮಾತನಾಡಿ ಕಳೆದ 11 ವರ್ಷಗಳ ಆಡಳಿತದಲ್ಲಿ 34 ಪ್ರತಿಶತದಲ್ಲಿ 27 ಪ್ರತಿಶತ ಕಡುಬಡವರು ಬಡತನ ರೇಖೆಯಿಂದ ಹೊರ ಬಂದಿದ್ದು 7.5 ಪ್ರತಿಶತ ಕಡುಬಡತನ ಹೊಂದಿದ್ದಾರೆ ಎಪ್ಪತ್ತು ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಬಡತನ ಹೋಗಲಾಡಿಸಲಿಲ್ಲ ಆದರೆ ಪ್ರಧಾನಿ ನರೇಂದ್ರ ಮೋದಿ ಬಂದ ಮೇಲೆ ಬಡವರು ನೆಮ್ಮದಿಯ ಜೀವನ ಸಾಗಿಸಲು ಅನುಕೂಲ ವಾಗುವಂತೆ ಹಲವು ಯೋಜನೆಗಳನ್ನು ನೀಡಿದ್ದು 11 ವರ್ಷಗಳ ಹಲವು ಸಾಧನೆಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಿಳಿಸುವ ಕೆಲಸ ಆಗಲಿ ಎಂದು ಹೇಳಿದರು.
ಬಿಜೆಪಿ ಮುಖಂಡರಾದ ಎಂ.ಬಿ ಜಿರಲಿ ಅವರು ಪ್ರಧಾನಿ ನರೇಂದ್ರ ಮೋದಿಜಿಯವರ 11 ವರ್ಷಗಳ ಸಾಧನೆಯ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ, ಮಹಾನಗರ ಜಿಲ್ಲಾಧ್ಯಕ್ಷರಾದ ಗೀತಾ ಸುತಾರ, ಶಾಸಕರಾದ ವಿಠ್ಠಲ ಹಲಗೇಕರ, ಮಾಜಿ ಸಂಸದರಾದ ಮಂಗಲಾ ಅಂಗಡಿ,ಮಾಜಿ ಶಾಸಕರಾದ ಮಹಾಂತೇಶ ಕವಟಗಿಮಠ, ಮಹಾನಗರ ಪಾಲಿಕೆ ಮಹಾಪೌರರಾದ ಮಂಗೇಶ್ ಪವಾರ್,ಉಪಮಹಾಪೌರರಾದ ವಾಣಿ ಜೋಶಿ, ರಾಜ್ಯ ಮಾಧ್ಯಮ ಸಮಿತಿ ಸದಸ್ಯ ಎಫ್ ಎಸ್ ಸಿದ್ಧನಗೌಡ್ರ, ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಸೋನಾಲಿ ಸರ್ನೋಬತ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ದೇಶಪಾಂಡೆ, ಮಲ್ಲಿಕಾರ್ಜುನ ಮಾದಮ್ಮನವರ, ಧನಶ್ರೀ ದೇಸಾಯಿ, ರಾಜಶೇಖರ್ ಡೋಣಿ, ಈರಯ್ಯ ಖೋತ್, ಹನುಮಂತ ಕೊಂಗಾಲಿ, ಶ್ರೇಯಸ್ ನಾಕಾಡಿ, ಜಿಲ್ಲೆಯ ಮಾಜಿ ಸೈನಿಕರು, ವೈದ್ಯರು, ವಕೀಲರು, ಇಂಜಿನಿಯರುಗಳು, ಶಿಕ್ಷಕರು ವಿವಿಧ ವೃತ್ತಿಪರರು ಹಾಗೂ ವಿವಿಧ ಮಂಡಲದ ಅಧ್ಯಕ್ಷರು ಪ್ರಮುಖ ಮುಖಂಡರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.