ಮುಡಾ ಮಾಜಿ ಆಯುಕ್ತರ ಶೋಧನೆ ರದ್ದುಗೊಳಿಸಿದ ಕೋರ್ಟ್

Ravi Talawar
ಮುಡಾ ಮಾಜಿ ಆಯುಕ್ತರ ಶೋಧನೆ ರದ್ದುಗೊಳಿಸಿದ ಕೋರ್ಟ್
WhatsApp Group Join Now
Telegram Group Join Now

ಬೆಂಗಳೂರು, ಜನವರಿ 30: ಮುಡಾ ಹಗರಣ ಸಂಬಂಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತ ಡಿಬಿ ನಟೇಶ್ ವಿರುದ್ಧದ ಜಾರಿ ನಿರ್ದೇಶನಾಲಯ ಸಮನ್ಸ್ ರದ್ದು ವಿಚಾರವಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ಸೂಚನೆ ನೀಡಿದೆ. ನಟೇಶ್ ವಿರುದ್ಧ ಪಿಎಂಎಲ್‌ಎ ಕಾಯ್ದೆ ಅಡಿಯ ಇಡಿ ಶೋಧನೆಯನ್ನು ಹೈಕೋರ್ಟ್ ಬುಧವಾರ ರದ್ದುಪಡಿಸಿದೆ.

ಏಕಪಕ್ಷೀಯ ಶೋಧನೆ ವಿರುದ್ಧವೂ ವ್ಯಕ್ತಿಗೆ ಖಾಸಗಿತನದ ಹಕ್ಕಿದೆ. ಮೇಲ್ನೋಟಕ್ಕೆ ಸಾಕ್ಷ್ಯಗಳಿಲ್ಲದಿದ್ರೂ ಇಡಿ ನಟೇಶ್ ಅವರನ್ನು ಶೋಧನೆಗೆ ಒಳಪಡಿಸಿದ್ದು ಕಾನೂನುಬಾಹಿರ ಎಂದು ನ್ಯಾ. ಹೇಮಂತ ಚಂದನ ಗೌಡರ್ ಅವರ ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

WhatsApp Group Join Now
Telegram Group Join Now
Share This Article