ಪ್ರಿಯಾಂಕ್​ ವಿರುದ್ಧ ಸಿಎ ನಿವೇಶನ ಮಂಜೂರು ಆರೋಪ: ಸರ್ಕಾರಕ್ಕೆ ವಿವರಣೆ ಕೇಳಿದ ರಾಜ್ಯಪಾಲ

Ravi Talawar
ಪ್ರಿಯಾಂಕ್​ ವಿರುದ್ಧ ಸಿಎ ನಿವೇಶನ ಮಂಜೂರು ಆರೋಪ: ಸರ್ಕಾರಕ್ಕೆ ವಿವರಣೆ ಕೇಳಿದ ರಾಜ್ಯಪಾಲ
WhatsApp Group Join Now
Telegram Group Join Now

ಬೆಂಗಳೂರು, ಸೆಪ್ಟೆಂಬರ್​ 02: ಪ್ರಭಾವ ಬಳಸಿ ಕೆಐಎಡಿಬಿಯಿಂದ ಸಿದ್ದಾರ್ಥ ಟ್ರಸ್ಟ್​​ಗೆ ಸಿಎ ನಿವೇಶನ  ಮಂಜೂರು ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್​ ಖರ್ಗೆ ಅವರ ವಿರುದ್ಧ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್​ ಚಂದ್​​​ ಗೆಹ್ಲೋಟ್​ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದಾರೆ.

ಏನಿದು ಆರೋಪ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ಟ್ರಸ್ಟಿಗಳಾಗಿರವ ಸಿದ್ಧಾರ್ಥ ವಿಹಾರ ಟ್ರಸ್ಟ್​​ಗೆ ನಿಯಮ ಉಲ್ಲಂಘನೆಯ ಜೊತೆಗೆ ತರಾತುರಿಯಲ್ಲಿ ಕೆಐಎಡಿಬಿಯಿಂದ ಐದು ಎಕರೆ ಸಿ.ಎ ನಿವೇಶನ ಮಂಜೂರು ಮಾಡಲಾಗಿದೆ. ಪ್ರಿಯಾಂಕ್​ ಖರ್ಗೆ ಸಚಿವರಾಗಿದ್ದುಕೊಂಡು ಹೀಗೆ ಸರ್ಕಾರಿ ಸೌಲಭ್ಯ ಪಡೆದಿದ್ದು ಸರಿಯೇ ಎಂದು ವಿಧಾನ ಪರಿಷತ್​ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
WhatsApp Group Join Now
Telegram Group Join Now
Share This Article