ಮತ್ತೊಂದು ಮಸೂದೆ ವಾಪಸ್‌ ಕಳುಹಿಸಿದ ರಾಜ್ಯಪಾಲ

Ravi Talawar
ಮತ್ತೊಂದು ಮಸೂದೆ ವಾಪಸ್‌ ಕಳುಹಿಸಿದ ರಾಜ್ಯಪಾಲ
WhatsApp Group Join Now
Telegram Group Join Now

ಬೆಂಗಳೂರು, ಫೆಬ್ರವರಿ 22: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್​ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ-2024 ಸೇರಿದಂತೆ ಒಟ್ಟು ಮೂರು ಮಸೂದೆಗಳಿಗೆ  ಸಹಿ ಹಾಕದೆ ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್​ ಅವರು ಸರ್ಕಾರಕ್ಕೆ ವಾಪಸ್ ಕಳಸಿದ್ದಾರೆ. ಈ ತಿದ್ದುಪಡಿಯು ದಾರಿ ತಪ್ಪಿಸುವಂತಿದೆ. ಬದಲಾವಣೆ ತರುವ ಉದ್ದೇಶಕ್ಕಿಂತಲೂ ಅಧಿಕಾರ ಕಿತ್ತುಕೊಳ್ಳುವ ಯತ್ನವಾಗಿದೆ ಎಂದಿದ್ದಾರೆ.

ವಾಪಸ್​ ಕಳುಹಿಸಿ ಇತರ ಎರಡು ಮಸೂದೆಗಳೆಂದರೆ ಮೈಸೂರು ಪ್ರಾಧಿಕಾರ ಅಭಿವೃದ್ಧಿ ಮಸೂದೆ- 2024 ಮತ್ತು ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ರಕ್ಷಣೆ (ತಿದ್ದುಪಡಿ) ಮಸೂದೆ-2024ಕ್ಕೆ ಸಹಿ ಹಾಕದೆ ರಾಜ್ಯಪಾಲರು ವಾಪಸ್​ ಕಳುಹಿಸಿದ್ದಾರೆ.

WhatsApp Group Join Now
Telegram Group Join Now
Share This Article