ಕ್ಷುಲ್ಲಕ ಕಾರಣಕ್ಕೆ ಪತ್ನಿ ಕೊಲೆಗೈದು ನೇಣಿಗೆ ಶರಣಾದ ಪತಿ

Ravi Talawar
ಕ್ಷುಲ್ಲಕ ಕಾರಣಕ್ಕೆ ಪತ್ನಿ ಕೊಲೆಗೈದು ನೇಣಿಗೆ ಶರಣಾದ ಪತಿ
WhatsApp Group Join Now
Telegram Group Join Now

ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಕೊಲೆಗೈದು ಬಳಿಕ ಪತಿಯೂ ನೇಣಿಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಪುಲಗಡ್ಡಿ‌‌ ಗ್ರಾಮದಲ್ಲಿ ನಡೆದಿದೆ.

ಅಣ್ಣಪ್ಪ ನಂದಿ ಮತ್ತು ಯಲ್ಲವ್ವ ನಂದಿ ಮೃತರು. ಸೋಮವಾರ ಸಂಜೆ ಎಮ್ಮೆ‌ ಮಾರಿ ಬಂದ ಹಣದಲ್ಲಿ ಅಣ್ಣಪ್ಪ ಕಂಠಪೂರ್ತಿ ಸಾರಾಯಿ ಕುಡಿದು ಬಂದಿದ್ದ. ಇದನ್ನು ಹೆಂಡತಿ ಪ್ರಶ್ನಿಸಿದ್ದಕ್ಕೆ ಆಕೆಯನ್ನೇ ಹತ್ಯೆ ಮಾಡಿರುವುದಾಗಿ ಪೊಲೀಸರ ಪ್ರಾಥಮಿಕ ತಮಿಖೆಯಿಂದ ತಿಳಿದು ಬಂದಿದೆ.

ಹೆಂಡತಿಯ ಕೊಲೆ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮನೆಯ ಹೊರಭಾಗದ ತಗಡಿನ್ ಶೆಡ್​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

WhatsApp Group Join Now
Telegram Group Join Now
Share This Article