ಕಾಂಗ್ರೆಸ್ ನಾಯಕಿಯನ್ನು ಭೀಕರವಾಗಿ ಹತ್ಯೆಗೈದ ಪತಿ ಪರಾರಿ

Ravi Talawar
ಕಾಂಗ್ರೆಸ್ ನಾಯಕಿಯನ್ನು ಭೀಕರವಾಗಿ ಹತ್ಯೆಗೈದ ಪತಿ ಪರಾರಿ
WhatsApp Group Join Now
Telegram Group Join Now

ಮೈಸೂರು,21: ಮೈಸೂರು ಜಿಲ್ಲೆಯ ಬನ್ನೂರಿನ ತುರಗನೂರಿನಲ್ಲಿ ಕಾಂಗ್ರೆಸ್ ನಾಯಕಿಯೊಬ್ಬರನ್ನು ಪತಿಯೇ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ.

ಹತ್ಯೆಯಾದ ಕಾಂಗ್ರೆಸ್ ನಾಯಕಿಯನ್ನು ವಿದ್ಯಾ ಎಂದು ಗುರುತಿಸಲಾಗಿದ್ದು, ಇವರು ಕಾಂಗ್ರೆಸ್ ನಲ್ಲಿ ಸಕ್ರಿಯರಾಗಿದ್ದರು. ಕೌಟುಂಬಿಕ ಕಲಹ ಹಿನ್ನೆಲೆ ಕೊಲೆಯಾಗಿದೆ ಎನ್ನಲಾಗಿದೆ.

ಮೈಸೂರಿನ ಶ್ರೀರಾಂಪುರ ನಿವಾಸಿಯಾಗಿರುವ ಆರೋಪಿ ನಂದೀಶ್‌, ಪತ್ನಿಯನ್ನು ಹತ್ಯೆಗೈದು ಪರಾರಿಯಾಗಿದ್ದಾನೆ. ನಿನ್ನೆ ತಡರಾತ್ರಿ ಬನ್ನೂರಿನ ತುರಗನೂರಿನಲ್ಲಿದ್ದ ಪತಿ ಮನೆಗೆ ವಿದ್ಯಾ ತೆರಳಿದ್ದಾರೆ. ದಂಪತಿ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ವೇಳೆ ಪತ್ನಿ ತಲೆಗೆ ನಂದೀಶ್ ಹಲ್ಲೆ ನಡೆಸಿ ಹತ್ಯೆಗೈದು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

WhatsApp Group Join Now
Telegram Group Join Now
Share This Article