೧೦ಎಸ್ಎನ್ಡಿ೦೨: ಕಳೆದ ನ.೨೫ರಂದು ಸಿಂದಗಿ ನಗರಕ್ಕೆ ಆಗಮಿಸಿ ಸಾರಂಗಮಠದ ಆವರಣದಲ್ಲಿ ರಾಷ್ಟ್ರೀಯ ಭಾಸ್ಕರಚಾರ್ಯ ಪ್ರಶಸ್ತಿಯನ್ನು ಸ್ವೀಕರಿಸಿದ್ದರು.
ಸಿಂದಗಿ: ಪದ್ಮಶ್ರೀ ಸಮ್ಮಾನಿತ, ಭಾರತೀಯ ಜಲಕೃಷಿ ವಿಜ್ಞಾನಿ, ಮೈಸೂರಿನ ಡಾ.ಸುಬ್ಬಣ್ಣ ಅಯ್ಯಪ್ಪನ್ ಅವರು ಕಳೆದ ನ.೨೫ರಂದು ಸಿಂದಗಿ ನಗರಕ್ಕೆ ಆಗಮಿಸಿ ರಾಷ್ಟ್ರೀಯ ಭಾಸ್ಕರಾಚಾರ್ಯ ಪ್ರಶಸ್ತಿಯನ್ನು ಸ್ವೀಕರಿಸಿದ್ದರು. ಸಿಂದಗಿ ಸಾರಂಗಮಠದ ಪೂಜ್ಯಶ್ರೀ ಚೆನ್ನವೀರ ಸ್ವಾಮೀಜಿ ಪ್ರತಿ?ನದ ವತಿಯಿಂದ ಪ್ರಶಸ್ತಿಯನ್ನು ನೀಡಲಾಗಿತ್ತು. ಕೃಷಿ ಕ್ಷೇತ್ರದಲ್ಲಿ ಅಪಾರ ಜ್ಞಾನ ಉಳ್ಳವರು, ಸಾಧನೆಯನ್ನು ಮಾಡಿದಂತವರು ವಿಧಿವಶಾರಾಗಿದ್ದಾರೆ ಎನ್ನುವ ವಿ?ಯ ಕೇಳಿ ನಮಗೆಲ್ಲರಿಗೂ ತುಂಬಾ ದುಃಖವಾಗಿದೆ. ಇ? ಬೇಗ ನಮ್ಮೆಲ್ಲರನ್ನು ಬಿಟ್ಟು ಅಗಲಿದ್ದಾರೆ ಎನ್ನುವುದು ವಿ?ಧನೀಯ ಸಂಗತಿ ಎಂದು ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.
ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು, ಶಾಸಕ ಅಶೋಕ ಮನಗೂಳಿ, ಮಾಜಿ ವಿಪ ಸದಸ್ಯ ಅರುಣ ಶಹಾಪೂರ, ಪೂಜ್ಯಶ್ರೀ ಚೆನ್ನವೀರಸ್ವಾಮೀಜಿ ಪ್ರತಿ?ನದ ಸದಸ್ಯರು, ಶ್ರೀಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ನಿರ್ದೇಶಕ ಮಂಡಳಿ, ಸಂಸ್ಥೆಯ ಸಿಬ್ಬಂದಿಗಳು ಸೇರಿದಂತೆ ಸಿಂದಗಿ ಜನತೆ ಅಗಲಿದ ಆತ್ಮಕ್ಕೆ ಸದ್ಗತಿ ಸಿಗಲಿ ಎಂದು ಸಂತಾಪ ಸೂಚಿಸಿದ್ದಾರೆ.
ಡಾ.ಸುಬ್ಬಣ್ಣ ಅಯ್ಯಪ್ಪನ್ ಅವರಿಗೆ ರಾಷ್ಟ್ರೀಯ ಭಾಸ್ಕರಚಾರ್ಯ ಪ್ರಶಸ್ತಿ
