ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು –  ಕುರಬೇಟ

MK HasiruKranti
ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು –  ಕುರಬೇಟ
WhatsApp Group Join Now
Telegram Group Join Now
ಯರಗಟ್ಟಿ: ವಿದ್ಯಾರ್ಥಿ ದೆಸೆಯಿಂದಲೇ ಸಮಾಜದಲ್ಲಿ ಶಾಂತಿ ನೆಲೆಸಲು ಅಗತ್ಯವಾದ ಕಾನೂನುಗಳ ಮಾಹಿತಿಯನ್ನು ಪಡೆದು ಸ್ವತಃ ಅನುಸರಿಸುವ ಮೂಲಕ ಇತರರಿಗೆ ಮಾದರಿಯಾಗಿ ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು ಎಂದು ರಾಮದುರ್ಗ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಮುಖ್ಯಪೇದೆ ಎಲ್.ಎಂ. ಕುರಬೇಟ  ಹೇಳಿದರು.
 ಪಟ್ಟಣದ ಶ್ರೀ ಸಿಎಂ ಮಾಮನಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ರೂಪಿಸಿರುವ ಅಕ್ಕ ಪಡೆಯ ಕಾರ್ಯ ಯೋಜನೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಮಾಜದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆ ಮಾಡುವಲ್ಲಿ ವಿದ್ಯಾರ್ಥಿಗಳು ಜವಾಬ್ದಾರಿಯುತ ವರ್ತನೆಯನ್ನು ನಿರ್ವಹಿಸಬೇಕಾದ ಅಗತ್ಯ ಇದೆ ಎಂದು ಪ್ರತಿಪಾದಿಸಿದರು.
 ಸೌದತ್ತಿ ಪೊಲೀಸ್ ಠಾಣೆಯ ಮಹಿಳಾ ಮುಖ್ಯಪೇದೆ ಎಸ್.ವಿ. ಹೊಸೂರ ಅವರು ಮಾತನಾಡಿ, ಸಮಾಜದಲ್ಲಿ ಮೌಲ್ಯಗಳು ಮರೆಯಾಗುತ್ತಿರುವುದರಿಂದ ಅಪರಾಧಗಳ ಸಂಖ್ಯೆ ಹೆಚ್ಚುತ್ತಿದೆ. ಆದ್ದರಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸದೊಂದಿಗೆ ಮೌಲ್ಯದ ಜೀವನವನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
 ಕಾಲೇಜಿನ ಪ್ರಾಂಶುಪಾಲರಾದ ಆರ್.ಎಸ್. ಮರಿಗೌಡರ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುರುಗೋಡ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ನಿರೀಕ್ಷಕರಾದ ವಿಜಯಾ ಸ್ವಾಮಿ, ಡಾ. ಸುನಂದಾ ಮಾದರ, ವಿಜಯಲಕ್ಷ್ಮಿ ಬದ್ದಿ, ಸಿದ್ದಲಿಂಗಪ್ಪ ಗಾಳಿ, ಶಂಕರ ಲಗಳಿ, ಡಾ. ರಾಜಶೇಖರ ಬಿರಾದಾರ ಸೇರಿದಂತೆ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ರಾಧಿಕಾ ಶಿದ್ದನ್ನವರ ನಿರೂಪಿಸಿದರು, ಡಾ. ಸುನೀತಾ ಸೊಪ್ಪಡ್ಲ ವಂದಿಸಿದರು.
WhatsApp Group Join Now
Telegram Group Join Now
Share This Article