ಜಮಖಂಡಿ ; ಸ್ವಾರ್ಥಕ್ಕಾಗಿ ದೇಶದ ಇತಿಹಾಸವನ್ನು ತಿರುಚುವ ಕೆಲಸ ನಡೆಯುತ್ತಿದೆ. ದೇಶವನ್ನು ಗಟ್ಟಿಯಾಗಿ ಕಟ್ಟಲು ಶ್ರಮಿಸಿದ ಟಿಪು ಸುಲ್ತಾನರ ಇತಿಹಾಸವನ್ನು ತಿರುಚುವ ಕೆಲಸ ನಡೆದಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ತಿಳಿಸಿದರು. ನಗರದ ಅಬುಬಕರ ದರ್ಗಾ ಮೈದಾನದಲ್ಲಿ ಶಹೀದ ಹಜರತ ಟಪು ಸುಲ್ತಾನ ಜಯಂತ್ಯೂತ್ಸವ ಸಮೀತಿ ವತಿಯಿಂದ ಏರ್ಪಡಿಸಿದ್ದ ಕೌಮಿ ಏಕತಾ ಸಮಾಮೇಶವನ್ನು ಉದ್ದೇಶಿಸಿ ಮಾತನಾಡಿದರು. ಟಿಪು ಸುಲ್ತಾನರು ದೇಶದ ಸ್ವತಂತ್ಯ್ರಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದರು ಆಗಿನ ಕಾಲದಲ್ಲೇ ರಾಕೇಟ್ಗಳನ್ನು ತಯಾರಿಸಿ, ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿದ್ದರು. ಅನೇಕ ಮಠ, ಮಂದಿಗರಳನ್ನು ನಿರ್ಮಿಸಿದ್ದರು, ನಾಣ್ಯಗಳನ್ನು ಚಲಾವಣೆಗೆ ತಂದಿದ್ದರು ಅವರ ಇತಿಹಾಸದ ಕುರಿತು ತಿಳಿದುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಹೇಳಿದರು. ಡಾ.ಅಂಬೇಡ್ಕರ ಅವರು ನೀಡಿರುವ ಮತದಾನದ ಹಕ್ಕನ್ನು ಸರಿಯಾರಿ ಬಳಸಿಕೊಂಡು ನಮಗೆ ಬೇಕಾದ ನಾಯಕರನ್ನು ಆರಿಸಿ ತರಬೇಕು,ಶೇ.75ರಷ್ಟಿರುವ ದಲಿತರು, ಮುಸ್ಲಿಂರು ಅಧಿಕಾರ ನಡೆಸುವಂತಾಬೇಕು, ಒಗ್ಗಟ್ಟಾಗದಿದ್ದರೆ ಉಳಿಗಾಲವಿಲ್ಲ ಎಂಬುದನ್ನು ತಿಳಿದುಕೊಳ್ಳಬೇಕು, ಕೆಟ್ಟ ಪ್ರವೃತ್ತಿಯನ್ನು ಬಿಟ್ಟು ಒಗ್ಗಟ್ಟಿನಿಂದ ಬಸವತತ್ವಗಳ ಆಚರಣೆಗೆ ತರುವ ಮೂಲಕ ಎಲ್ಲರೂ ಸಮಾನರಾಗಿ ಬಾಳುವೆ ನಡೆಸಬೇಕು ಎಂದು ಅಭಿಪ್ರಾಯ ಪಟ್ಟರು. ಮಾಜಿ ಶಾಸಕ ಆನಂದ ನ್ಯಾಮಗೌಡ ಮಾತನಾಡಿ ನರೇಗಾ ಯೋಜನೆಯಲ್ಲಿದ್ದ
ಮಹತ್ಮಾಗಾಂಧಿ ಯವರ ಹೆಸರನ್ನು ತೆಗೆಯುವ ಕೆಲಸ ಮಾಡಿದ್ದಾರೆ ಆದರೆ ದೇಶದ ಜನರ ಮನಸ್ಸಿನಲ್ಲಿರುವ ಅವರ ಚಿಂತನೆಗಳನ್ನು ತೆಗೆಯಲು ಸಾಧ್ಯವಿಲ್ಲ. ಕಾಂಗ್ರೆಸ್ ದೇಶವನ್ನು ಸರ್ವಜನಾಂಗದ ಶಾಂತಿಯ ತೊಟ ಮಾಡಲು ಶ್ರಮಿಸುತ್ತಿದೆ ಯಾರೂ ಭಯ ಪಡುವ ಅಗತ್ಯವಿಲ್ಲ ಎಂದು ಹೇಳಿದರು. ಟಿಪು ಸುಲ್ತಾನರು ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿದ್ದರು. ಫ್ರೆಂಚರ ಸಹಾಯ ದಿಂದ ರಾಕೇಟ್ಗಳನ್ನು ತಯಾರಿಸಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದರು. ಅವರ ಇತಿಹಾಸವನ್ನು ತಿಳಿದು ಕೊಳ್ಳಬೇಕು. ಎಲ್ಲರೂ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುವ ಮೂಲಕ ಮುಖ್ಯವಾಗಹಿನಿಗೆ ಬರಬೇಕಾದ ಅವಶ್ಯಕತೆ ಇದೆ ಎಂದು ಹೇಳಿದರು.
ಹಾವೇರಿಯ ಅಲ್ಲಮಪ್ರಭು ಅಹಿಂದ ಪೀಠದ ಮಹೇಶ್ವರಾನಂದ ಸ್ವಾಮಿಜಿ ಮಾತನಾಡಿ ದಲಿತರು, ಓಬಿಸಿಗಳು, ಮುಸ್ಲಿಂಮರು ಸೇರಿ 97 /ಶೇಕಡಾ ಜನರಿದ್ದರೂ ಅಧಿಕಾರ ನಮ್ಮಬಳಿ ಇಲ್ಲವಾಗಿದೆ. ಅತ್ಯಂತ ಕಡಿಮೆ ಜನ ಸಂಖ್ಯೆಯ ಜನರು ನಮ್ಮನ್ನು ಆಳುತ್ತಿದ್ದಾರೆ. ಎಲ್ಲ ಹಿಂದುಳಿದ ಸಮಾಜಗಳು ಒಗ್ಗಟ್ಟಾಗಬೇಕು, ದೇಶವನ್ನು ಹಾಳು ಮಾಡಲು ಹೊರಟಿರುವ ಅಧಿಕಾರದಲ್ಲಿರುವರ ವಿರುದ್ಧ ಒಗ್ಗಟ್ಟಾಗ ಬೇಕು, ಅವರನ್ನು ಯಹೂದಿಗಳು ಎಂದು ಸಂಭೋಧಿಸುತ್ತೇನೆ ಎಂದು ಹೇಳಿದರು.ರಾಜ್ಯದಲ್ಲಿ ಕೋಟಿ ಜನರಿರುವ ಮುಸ್ಲಿಂರ 30 ಶಾಸಕರಿರಬೇಕು, ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪು ಸುಲ್ತಾನರ ಹೆಸರಿಡಬೇಕು ಎಂದು ಹೇಳಿದರು. ನಟ ಶಾರೂಖ ಖಾನ ಟಿಪು ಸುಲ್ತಾನರ ಸಿನೆಮಾ ಮಾಡಬೇಕೆಂದು ಸಲಹೆ ನೀಡಿದರು. ಸಮಿತಿಯ ಅಧ್ಯಕ್ಷ ನಜೀರ ಕಂಗನೊಳ್ಳಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು., ಉಪಾಧ್ಯಕ್ಷ ಡಾ. ತೌಫಿಕ್ ಪಾರ್ಥನಳ್ಳಿ ಮಾನಾಡಿದರು. ಬಿಹಾರದ ಮೌಲಾನಾ ಅಬ್ದುಲ್ಲಾಸಾಲೀಂಕಮರ ಚತುರ್ವೇದಿ, ಉತ್ತರಪ್ರದೇಶದ ಹಜರತ ಪೀರ ಸೈಯದ ಕಾಸಿಂ ಅಶ್ರಫ, ಬಾಗಲಕೊಟೆಯ ಹಜರತ ಮೌಲಾನಾ ಮೊಹಸೀನಅಹಮದ್,ಕಾರಿ ಸಮಿಉಲ್ಲಾ ಖಾದ್ರಿ, ಮಾನತಾಡಿದರು. ಎಐಎಂಐಎಂ ಪಕ್ಷದ ರಾಜ್ಯಾಧ್ಯಕ್ಷ ಲತೀಫ ಖಾನ ಪಠಾಣ, ಓಲೆ ಮಠದ ಆನಂದ ದೇವರು, ರುದ್ರಾವಧೂತ ಮಠದ ಸಹಜಾನಂದ ಶ್ರೀಗಳು, ಅರ್ಬನ್ ಬ್ಯಾಂಕ್ ಅಧ್ಯಕ್ಷ ರಾಹುಲ್ ಕಲೂತಿ, ಸುಶೀಲ ಕುಮಾರ ಬೆಳಗಲಿ, ಡಾ. ರಾಜು ಗಸ್ತಿ, ರಿಯಾಜ ಅವಟಿ, ರಫಿಕ್ ಬಾರಿಗಡ್ಡಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅನ್ವರ ಮೋಮಿನ, ಈಶ್ವರ ವಾಳೆಣ್ಣವರ,ಕಾರ್ಯದರ್ಶಿ ಸಮೀರ ಇಲಾಹಿ ಕಂಗನೊಳ್ಳಿ, ಖಜಾಂಚಿ ಅಲ್ತಾಫ ಸಗರ, ಅಬ್ದುಲ್ಸಾಬ ಜಮಾದಾರ, ಅಬುಬಕರ ಕುಡಚಿ,ಸೇರಿದಂತೆ ಸಮಿತಿ ಹಾಗೂ ಸಲಹಾ ಸಮಿತಿಯ ಸದಸ್ಯರು ವೇದಿಕೆಯಲ್ಲಿದ್ದರು.


