ಬುಡಕಟ್ಟು ಜನರು ಮುಖ್ಯವಾಹಿನಿಗೆ ಬರಲಿ : ಸಂಸದ ಈ.ತುಕಾರಾಂ

Ravi Talawar
ಬುಡಕಟ್ಟು ಜನರು ಮುಖ್ಯವಾಹಿನಿಗೆ ಬರಲಿ : ಸಂಸದ ಈ.ತುಕಾರಾಂ
WhatsApp Group Join Now
Telegram Group Join Now
ಬಳ್ಳಾರಿ, ಜು.16 ಕೇಂದ್ರ ಸರ್ಕಾರ ಜನಸಾಮಾನ್ಯರ ಶ್ರೇಯೋಭಿವೃದ್ಧಿಗಾಗಿ ಜಾರಿಗೊಳಿಸಿರುವ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಗುರಿ ನಮ್ಮದಾಗಿದ್ದು, ಪಿ.ಎಂ ಜನಜಾತಿ ಉನ್ನತ ಗ್ರಾಮ ಅಭಿಯಾನದಡಿ ಧರ್ತಿ ಆಬಾ ಜನಭಾಗಿ ಅಭಿಯಾ£ವನ್ನು ಜು.15 ರಿಂದ ಜು.30 ರವರೆಗೆ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಬುಡಕಟ್ಟು ಸಮುದಾಯಗಳು ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡೆದು ಮುಖ್ಯವಾಹಿನಿಗೆ ಬರಬೇಕು ಎಂದು ಸಂಸದರಾದ ಈ.ತುಕಾರಾಂ ಅವರು ಹೇಳಿದರು.
ಕೇಂದ್ರ ಸರ್ಕಾರ ಬುಡಕಟ್ಟು ಮಂತ್ರಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಬಳ್ಳಾರಿ ಇವರ ಸಹಯೋಗದಲ್ಲಿ ಕೇಂದ್ರ ಸರ್ಕಾರದ ಪಿ.ಎಂ ಜನಜಾತಿ ಉನ್ನತ ಗ್ರಾಮ ಅಭಿಯಾನದಡಿ “ಧರ್ತಿ ಆಬಾ ಜನಭಾಗಿಧಾರಿ ಅಭಿಯಾನದ ಸಂಪೂರ್ಣ ಸವಲತ್ತುಗಳ ಜಾಗೃತಿ ಅಭಿಯಾನ” ಕ್ಕೆ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ದೇಶದಲ್ಲಿ ಪರಿಶಿಷ್ಟ ಪಂಗಡ ಜನಾಂಗದವರು ಹೆಚ್ಚಾಗಿರುವ 26 ರಾಜ್ಯಗಳು, 04 ಕೇಂದ್ರಾಡಳಿತ ಪ್ರದೇಶಗಳು, ರಾಜ್ಯದ 28 ಜಿಲ್ಲೆಗಳು, 1089 ಗ್ರಾಮಗಳನ್ನು ಆಯ್ಕೆ ಮಾಡಲಾಗಿದ್ದು, ಆ ಪೈಕಿ ಬಳ್ಳಾರಿ ಜಿಲ್ಲೆಯ 5 ವಲಯಗಳಿಂದ (ತಾಲೂಕುಗಳಿಂದ) ಒಟ್ಟು 59 ಗ್ರಾಮಗಳನ್ನು ಪ್ರಧಾನಮಂತ್ರಿ ಜನಜಾತಿ ಉನ್ನತ ಗ್ರಾಮ ಅಭಿಯಾನದಡಿ ಆಯ್ಕೆ ಮಾಡಲಾಗಿದೆ.  ದೇಶದಲ್ಲಿ ಸುಮಾರು 5.5 ಕೋಟಿ ಬುಡಕಟ್ಟು ಜನಸಂಖ್ಯೆಯಿದ್ದು, ಬುಡಕಟ್ಟು ಜನ ಸಮಗ್ರ ಅಭಿವೃದ್ಧಿಗಾಗಿ ಮೂಲಭೂತ ಸೌಕರ್ಯಗಳು, ಆರೋಗ್ಯ, ಶಿಕ್ಷಣ, ಜೀವನೋಪಾಯಕ್ಕೆ ಬೇಕಾದ ಸೌಲಭ್ಯಗಳನ್ನು ಒದಗಿಸಿಕೊಡಲು ಒಟ್ಟಾರೆಯಾಗಿ ಬುಡಕಟ್ಟು ಜನರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗೆ ಕ್ರಿಯಾಯೋಜನೆ ರೂಪಿಸಲು ಕ್ರಮಕೈಗೊಳ್ಳಬೇಕಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು, ಮೀಸಲಿರುವ 79,156 ಕೋಟಿ ರೂ. ಗಳಲ್ಲಿ ಬುಡಕಟ್ಟು ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ದೇಶದ 63,000 ಗ್ರಾಮಗಳಲ್ಲಿ ಅಭಿವೃದ್ಧಿಪಡಿಸಲು ಕ್ರಿಯಾಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.
ಕೇಂದ್ರ ಬುಡಕಟ್ಟು ಮಂತ್ರಾಲಯ ಈ ಯೋಜನೆಗಳನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ಹೊತ್ತಿದೆ.  ದೇಶದ ಸುಮಾರು 8 ಕೋಟಿ ಜನರಿಗೆ ಯೋಜನೆಯ ಲಾಭ ದೊರೆಯಲಿದೆ. 2024-25 ರಿಂದ 2028-29ನೇ ಸಾಲಿನವರೆಗೆ 5 ವಷÀðಗಳಲ್ಲಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು. 2024-25 ರಿಂದ 2025-26ನೇ ಸಾಲಿಗೆ ಮೊದಲ ಹಂತದಲ್ಲಿ 4,000 ಕೋಟಿ ಅನುದಾನವನ್ನು ಪ್ರಧಾನಮಂತ್ರಿ ಜನಜಾತಿ ಉನ್ನತ ಗ್ರಾಮ ಅಭಿಯಾನದಡಿ 17 ಇಲಾಖೆಗಳ ಸಹಯೋಗದಲ್ಲಿ ಜಿಲ್ಲೆಯ 59 ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕ್ರಿಯಾಯೋಜನೆಯನ್ನು ಸಿದ್ಧಪಡಿಸಬೇಕಾಗಿದೆ. ಈ ಯೋಜನೆಗೆ ಒಳಪಟ್ಟ 59 ಗ್ರಾಮದ ಜನರು ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಜಿಲ್ಲಾಧಿಕಾರಿ ಪ್ರಶಾಂತ್ ಮಿಶ್ರಾ, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೇರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ, ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ರಾಘವೇಂದ್ರ ವರ್ಮಾ ಸೇರಿದಂತೆ ಇಲಾಖೆಯ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article