ಧರ್ಮಸ್ಥಳ ಕೇಸ್‌ನಲ್ಲಿ ಕೊನೆಗೂ ಬೆಳ್ತಂಗಡಿ ಕೋರ್ಟ್​​ಗೆ ತಿಮರೋಡಿ ಹಾಜರ್​!

Ravi Talawar
ಧರ್ಮಸ್ಥಳ ಕೇಸ್‌ನಲ್ಲಿ ಕೊನೆಗೂ ಬೆಳ್ತಂಗಡಿ ಕೋರ್ಟ್​​ಗೆ ತಿಮರೋಡಿ ಹಾಜರ್​!
WhatsApp Group Join Now
Telegram Group Join Now

ಮಂಗಳೂರ:    ಧರ್ಮಸ್ಥಳದ ಬುರುಡೆ ಪ್ರಕರಣ ಹಾಗೂ ಸೌಜನ್ಯ ಪ್ರಕರಣದಲ್ಲಿ  ಹೋರಾಟ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ  ಕೊನೆಗೂ ಬೆಳ್ತಂಗಡಿ ಕೋರ್ಟ್ಗೆ ಹಾಜರಾಗಿದ್ದಾರೆದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಕಳೆದ ಹಲವು ದಿನಗಳಿಂದ ಬಂಧನದ ಭಯದಿಂದ ತಲೆಮರೆಸಿಕೊಂಡಿದ್ದರು ಎನ್ನಲಾಗಿದ್ದುಇದೀಗ ದಿಢೀರ್​ ಬೆಳ್ತಂಗಡಿ ಕೋರ್ಟ್ಗೆ ಹಾಜರಾಗಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಂಟ್ ಜಾರಿಗೊಳಿಸಲಾಗಿತ್ತುಆದರೆ ಕೊನೆಗೂ ಅವರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿವಾರಂಟ್ ರದ್ದುಗೊಳಿಸುವ ಅರ್ಜಿ ಸಲ್ಲಿಸಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ ಧರ್ಮಸ್ಥಳದಲ್ಲಿ ನಡೆದ ತಲೆಬುರುಡೆ (ಮಸ್ ಬರಿಯಲ್ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ (ಸ್ಪೆಷಲ್ ಇನ್‌ವೆಸ್ಟಿಗೇಷನ್ ಟೀಮ್ವಿಚಾರಣೆಗೆ ಹಾಜರಾಗಬೇಕಾಗಿತ್ತು. ಈ ಪ್ರಕರಣವು ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆಯ ಆರೋಪಗಳನ್ನು ಒಳಗೊಂಡಿದ್ದುಇದರಲ್ಲಿ ರಾಜಕೀಯ ಮತ್ತು ಧಾರ್ಮಿಕ ವೈರತ್ವಗಳು ತೊಡಗಿದ್ದುತಿಮರೋಡಿ, ಗಿರೀಶ್ ಮಟ್ಟಣ್ಣವರ್ಜಯಂತ್ ಟಿವಿಠಲ್ ಗೌಡ ಸೇರಿದಂತೆ ನಾಲ್ವರನ್ನು ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತುಆದರೆ ತಿಮರೋಡಿ ತಪ್ಪಿಸಿಕೊಂಡಿದ್ದರುಇದರಿಂದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿವಾರಂಟ್ ಹೊರಡಿಸಲಾಗಿತ್ತು.

WhatsApp Group Join Now
Telegram Group Join Now
Share This Article