ಮುಂಬರಲಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ, ತೃಣಮೂಲ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಕಾಂಗ್ರೆಸ್ ಸಹಾಯ ಮಾಡಲಿಲ್ಲ, ಹರ್ಯಾಣದಲ್ಲಿ ಎಎಪಿ ಕಾಂಗ್ರೆಸ್ಗೆ ಸಹಾಯ ಮಾಡಲಿಲ್ಲ, ಆದ್ದರಿಂದ ಎರಡೂ ರಾಜ್ಯಗಳಲ್ಲಿ ಬಿಜೆಪಿ ಗೆದ್ದಿದೆ. ಎಲ್ಲರೂ ಒಗ್ಗಟ್ಟಾಗಿರಬೇಕು. ಆದರೆ ಬಂಗಾಳದಲ್ಲಿ ಕಾಂಗ್ರೆಸ್ ಏನೂ ಮಾಡಿಲ್ಲ, ನಾವು ಒಂಟಿಯಾಗಿ ಹೋರಾಡುತ್ತೇವೆ, ನಾವೇ ಸಾಕು ಎಂದು ಬ್ಯಾನರ್ಜಿ ಹೇಳಿದ್ದಾರೆ.