ಗದಗ ಮತಕ್ಷೇತ್ರದಿಂದ ಬಸವರಾಜ ಬೊಮ್ಮಾಯಿಗೆ ಸನ್ಮಾನ

Ravi Talawar
ಗದಗ ಮತಕ್ಷೇತ್ರದಿಂದ ಬಸವರಾಜ ಬೊಮ್ಮಾಯಿಗೆ ಸನ್ಮಾನ
WhatsApp Group Join Now
Telegram Group Join Now

ಗದಗ- ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗು ನೂತನ ಹಾವೇರಿ-ಗದಗ ಮತಕ್ಷೇತ್ರದ ಸಂಸದರಾಗಿ  ಆಯ್ಕೆಯಾದ ಬಸವರಾಜ ಬೊಮ್ಮಾಯಿರವರಿಗೆ ಗದಗ ಮತಕ್ಷೇತ್ರದಿಂದ ಇಂದು ದಿ, ೩೦-೦೬-೨೦೨೪ ರ ರವಿವಾರ ಮಧ್ಯಾಹ್ನ ೦೧:೩೦ ಗಂಟೆಗೆ ಗದಗ ನಗರದ ತೊಂಟದಾರ್ಯ
ಕಲ್ಯಾಣ ಮಂಟಪದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಈ ಕಾರ್ಯಕ್ರಮದ ಘನಅಧ್ಯಕ್ಷತೆಯನ್ನು ಗದಗ ಜಿಲ್ಲಾಧ್ಯಕ್ಷರಾದ ತೋಟಪ್ಪ(ರಾಜು) ಕುರುಡಗಿ ವಹಿಸಲಿದ್ದಾರೆ.

ಈ ಸಭೆಯಲ್ಲಿ ಮಾಜಿ ಸಚಿವರು ಹಾಗು ಹಾಲಿ ಶಾಸಕರಾದ ಸಿ.ಸಿ.ಪಾಟೀಲ, ಶಾಸಕರಾದ ಚಂದ್ರು ಲಮಾಣಿ, ಮಾಜಿ ಸಚಿವರಾದ ಕಳಕಪ್ಪ ಬಂಡಿ, ವಿಧಾನ ಪರಿಷತ್ ಸದಸ್ಯರಾದ ಎಸ್.ವ್ಹಿ.ಸಂಕನೂರ, ಯುವ ನಾಯಕರಾದ ಅನೀಲ ಮೆಣಸಿನಕಾಯಿ ಹಾಗು ಪಕ್ಷದ ಅನೇಕ ದುರಿಣರುಗಳು ಭಾಗವಹಿಸಲಿದ್ದು ಈ ಸಭೆಗೆ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು, ಚುನಾಯಿತ ಪ್ರತಿನಿಧಿಗಳು, ಸಂಘ ಸಂಸ್ಥೆಯ ಪದಾಧಿಕಾರಿಗಳು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಶಹರ ಅಧ್ಯಕ್ಷರಾದ ಅನೀಲ ಅಬ್ಬಿಗೇರಿ ಹಾಗು ಗ್ರಾಮೀಣ ಅಧ್ಯಕ್ಷರಾದ ದ್ಯಾಮಣ್ಣ ನೀಲಗುಂದ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

 

WhatsApp Group Join Now
Telegram Group Join Now
Share This Article