14 ರಂದು  ಸಂಗೊಳ್ಳಿ ರಾಯಣ್ಣ ಮಹಾವಿದ್ಯಾಲಯದಲ್ಲಿ ವಿವಿಧ ಕಾರ್ಯಕ್ರಮ

Ravi Talawar
14 ರಂದು  ಸಂಗೊಳ್ಳಿ ರಾಯಣ್ಣ ಮಹಾವಿದ್ಯಾಲಯದಲ್ಲಿ ವಿವಿಧ ಕಾರ್ಯಕ್ರಮ
WhatsApp Group Join Now
Telegram Group Join Now

ಬೆಳಗಾವಿ: ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಮತ್ತು ಎನ್ ಎಸ್ ಎಸ್, ಕ್ರೀಡೆ, ರೆಡ್ ಕ್ರಾಸ್, ಸಾಂಸ್ಕೃತಿಕ ಹಾಗೂ ವಿವಿಧ ಕೋಶಗಳ ಸಮಾರೋಪ ಸಮಾರಂಭವನ್ನು ಮಹಾವಿದ್ಯಾಲಯದ ಸಭಾಂಗಣದಲ್ಲಿ  ಬುಧವಾರ 14 ರಂದು  ಹಮ್ಮಿಕೊಳ್ಳಲಾಗಿದೆ.

ಸಮಾರಂಭವನ್ನು  ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳಾದ  ಪ್ರೊ. ಸಿ. ಎಂ. ತ್ಯಾಗರಾಜ ಅವರು  ಉದ್ಘಾಟಿಸಲಿದ್ದಾರೆ.  ಮುಖ್ಯ ಅತಿಥಿಗಳಾಗಿ ಖ್ಯಾತ ಸಾಹಿತಿ ವಿನಯಾ ಒಕ್ಕುಂದ,  ರಾಚವಿ ಪ್ರಭಾರ ಕುಲಸಚಿವರು ಮತ್ತು ಹಣಕಾಸು ಅಧಿಕಾರಿಗಳಾದ  ಶ್ರೀಮತಿ ಎಂ. ಎ. ಸಪ್ನಾ ಹಾಗೂ ರಾಚವಿ ಮೌಲ್ಯಮಾಪನ ಕುಲಸಚಿವರಾದ ಪ್ರೊ. ರವೀಂದ್ರನಾಥ ಎನ್ ಕದಂ ಅವರು ಆಗಮಿಸಲಿದ್ದಾರೆ.

ಮಹಾವಿದ್ಯಾಲಯದ  ಪ್ರಾಂಶುಪಾಲರಾದ ಪ್ರೊ. ಎಂ. ಜಿ. ಹೆಗಡೆ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ಕೋಶಗಳ ಸಂಯೋಜನಾಧಿಕಾರಿಗಳು, ವಿದ್ಯಾರ್ಥಿಗಳು  ಮತ್ತು ವಿದ್ಯಾರ್ಥಿ ಪ್ರತಿನಿಧಿಗಳು ಸಿಬ್ಬಂದಿವರ್ಗ ಉಪಸ್ಥಿತರಿರುವರೆಂದು ಮಹಾವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ  ಗಜಾನನ ಗೋವಿಂದಪ್ಪಗೋಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article