ಪಕ್ಷ ಬಲವರ್ಧನೆ ದೃಷ್ಟಿಯಿಂದ ಕಾರ್ಯಕರ್ತರು ಸಕ್ರಿಯವಾಗಿ ಕಾರ್ಯ ನಿರ್ವಹಿಸಿ: ಪಿ. ರಾಜೀವ್ 

Ravi Talawar
ಪಕ್ಷ ಬಲವರ್ಧನೆ ದೃಷ್ಟಿಯಿಂದ ಕಾರ್ಯಕರ್ತರು ಸಕ್ರಿಯವಾಗಿ ಕಾರ್ಯ ನಿರ್ವಹಿಸಿ: ಪಿ. ರಾಜೀವ್ 
WhatsApp Group Join Now
Telegram Group Join Now
ಬೆಳಗಾವಿ. ದೇಶದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಇನ್ನೂ ಹೆಚ್ಚಿನ ಮಟ್ಟದಲ್ಲಿ ಕಾರ್ಯಕರ್ತರು ಪಕ್ಷದ ಬಲವರ್ಧನೆಗೆ ಸಕ್ರಿಯವಾಗಿ ಕಾರ್ಯ ನಿರ್ವಹಿಸಿ ಎಂದು ಬಿಜೆಪಿ  ರಾಜ್ಯಪ್ರಧಾನ ಕಾರ್ಯದರ್ಶಿಗಳಾದ ಪಿ. ರಾಜೀವ್ ಹೇಳಿದರು.
    ಅವರು ನಗರದ   ಮಹಾವೀರ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ವಿಭಾಗ ಮಟ್ಟದ ಸಂಘಟನಾತ್ಮಕ ಸಭೆ ಮಾತನಾಡಿದರು.
         ಈ ಸಂದರ್ಭದಲ್ಲಿ ಭಾ.ಜ.ಪಾ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ ಮಾತನಾಡಿ ಸದಸ್ಯತ್ವ ಅಭಿಯಾನ ಯಶಸ್ವಿಯಾಗಿ ಮುನ್ನಡೆಸಿ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸೋಣ ಎಂದು  ಕರೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಶಾಸಕರಾದ ಅಭಯ ಪಾಟೀಲ, ಸಿದ್ದು ಸವದಿ, ಮಾಜಿ ಶಾಸಕರಾದ ಸಂಜಯ್ ಪಾಟೀಲ, ಮಹಾಂತೇಶ ದೊಡ್ಡಗೌಡರ, ಜಗದೀಶ್ ಮೆಟಗುಡ್ಡ, ವಿಶ್ವನಾಥ ಪಾಟೀಲ, ಬಸವರಾಜ್ ಯಂಕಂಜಿ, ಅಣ್ಣಾಸಾಹೇಬ ಜೊಲ್ಲೆ, ಬಸವರಾಜ ಹುಂದ್ರಿ, ಬಾಗಲಕೋಟೆ,ವಿಜಯಪೂರ, ಚಿಕ್ಕೋಡಿ ಜಿಲ್ಲೆಗಳ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಧನ್ಯಕುಮಾರ ಪಾಟೀಲ್ ಸ್ವಾಗತಿಸಿದರು ಶಿವಾನಂದ ಹನುಮಸಾಗರ ನಿರೂಪಿಸಿದರು ವೀರಭದ್ರ ಪೂಜಾರಿ ವಂದಿಸಿದರು.
WhatsApp Group Join Now
Telegram Group Join Now
Share This Article