ಎರಡು ದಿನಗಳ ನಂತರ ಮತ್ತೆ ಮಳೆ: 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Ravi Talawar
ಎರಡು ದಿನಗಳ ನಂತರ ಮತ್ತೆ ಮಳೆ: 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯಾದ್ಯಂತ ಮಳೆ ಇಳಿಮುಖವಾಗಿದ್ದರೂ ಎರಡು ದಿನಗಳ ನಂತರ ಮತ್ತೆ ಆರಂಭವಾಗಲಿದೆ ಎಂದು ಹೇಳಿರುವ ಭಾರತೀಯ ಹವಾಮಾನ ಇಲಾಖೆ, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಯೆಲ್ಲೋ ಅಲರ್ಟ್​ ಎಲ್ಲೆಲ್ಲಿ?: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯಪುರ, ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿರುವ ಹವಾಮಾನ ಇಲಾಖೆ ಈ ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಿದೆ.

ಸಾಧಾರಣ ಮಳೆ ಸಂಭವ: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಕಳೆದ ದಿನ ಅಂಕೋಲಾ, ಆಗುಂಬೆ, ಮಾಣಿ, ಕೋಟಾ, ಕದ್ರಾ, ಬಂಡೀಪುರ, ಶಕ್ತಿನಗರ, ರಾಯಲ್ಪಾಡು, ಪುತ್ತೂರು, ಮಂಗಳೂರು, ಕೊಟ್ಟಿಗೆಹಾರ, ಕಾರವಾರ, ಗೋಕರ್ಣದಲ್ಲಿ ಉತ್ತಮ ಮಳೆಯಾಗಿದೆ ಎಂದು ತಿಳಿಸಿದೆ.

WhatsApp Group Join Now
Telegram Group Join Now
Share This Article