ರಾಜ್ಯದಲ್ಲಿ ನಾಳೆ ವರುಣನ ಅಬ್ಬರ: 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​

Ravi Talawar
ರಾಜ್ಯದಲ್ಲಿ ನಾಳೆ ವರುಣನ ಅಬ್ಬರ: 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​
WhatsApp Group Join Now
Telegram Group Join Now

ಬೆಂಗಳೂರು, ಅಕ್ಟೋಬರ್​ 13: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನಾಳೆ ವರುಣ ಅಬ್ಬರಿಸಲಿದ್ದು, 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮಲೆನಾಡು ಮತ್ತು ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಲಿದ್ದು, ಕಲ್ಯಾಣ ಮತ್ತು ಉತ್ತರ ಕರ್ನಾಟಕ ಭಾಗದಲ್ಲೂ ವರುಣಾರ್ಭಟ ಇರಲಿದೆ. ಹಳೆ ಮೈಸೂರು ಮತ್ತು ಬೆಂಗಳೂರು ಭಾಗದಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಹಾಸನ, ಕೊಡಗು, ಯಾದಗಿರಿ, ಕಲಬುರಗಿ, ರಾಯಚೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲವೆಡೆ ಸಾಧಾರಣ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್​, ಗದಗ, ಹಾವೇರಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣ ಹವೆ ಇರಲಿದ್ದು, ಕೆಲವೆಡೆ ಮಾತ್ರ ಮೋಡ ಕವಿದ ವಾತಾವರಣ ಇರಲಿದೆ.

 

WhatsApp Group Join Now
Telegram Group Join Now
Share This Article